ಸಾಧನೆಯ ಹಾದಿ | ಮಕ್ಕಳ ಕಥೆ | ವೆಂಕಟೇಶ ಚಾಗಿ | sadhaneya hadi | makkala kathe | venkatesh chagi | story

ಸಾಧನೆಯ ಹಾದಿ ಕಮಲಾಪುರ ಎಂಬ ಊರಿನಲ್ಲಿ ರಾಮಯ್ಯ ಎಂಬ ರೈತನಿದ್ದನು. ರಾಮಯ್ಯ ತನಗೆ ತನ್ನ ಪೂರ್ವಿಕರಿಂದ ಬಂದ ಜಮೀನಿನಲ್ಲಿ ಉತ್ತಿ ಬಿತ್ತಿ ಬೆಳೆ ಬೆಳೆದು ಸುಖವಾಗಿ ಜೀವನ ಸಾಗಿಸುತ್ತಿದ್ದನು. ಯಾವುದೇ ಆಮೀಷಕ್ಕೆ ಅತೀ ಆಶೆಗೆ ಒಳಗಾಗದೇ ಕಷ್ಟ ಪಟ್ಟು ದುಡಿಯುವುದೇ ಅವನ ನಿತ್ಯ ಕಾಯಕವಾಗಿತ್ತು. ತನ್ನ ದಿನದ ಬಹುತೇಕ ಭಾಗವನ್ನು ಹೊಲ ಗದ್ದೆಗಳಲ್ಲಿ ಕಳೆಯುತ್ತಿದ್ದನು. ಕೆಲವು ಜನರು ಅವನನ್ನು ಆಸೆಬುರುಕ ಎಂತಲೂ ಲೋಭಿ ಎಂತಲೂ ಮತಿ ಹೀನ ಎಂತಲೂ ಕರೆಯುತ್ತಿದ್ದರು. ಆದರೂ ಯಾರ ಮಾತಿಗು ಗಮನ ಕೊಡದೆ ತನ್ನ ಕಾಯಕವನ್ನು ತಪ್ಪದೆ ಮಾಡುತ್ತಿದ್ದನು. ರಾಮಯ್ಯನಿಗೆ ಒಬ್ಬ ಮಗನಿದ್ದನು. ಅವನ ಹೆಸರು ಕಮಲಾಕರ ಎಂದು. ಕಮಲಾಕರ ಅಪ್ಪನ ವಿರುದ್ದ ಗುಣಗಳನ್ನು ಹೊಂದಿದ್ದ. ಹೊಲದಲ್ಲಿ ದುಡಿಯುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ತಾನೊಬ್ಬ ದೊಡ್ಡ ವಿದ್ವಾಂಸನಾಗಿ ಮಾಹಾರಾಜರಿಂದ ಸನ್ಮಾನಿತನಾಗಬೇಕು ಎಂಬ ಬಯಕೆ ಅವನಲ್ಲಿ ಮೂಡಿತ್ತು . ಇದಕ್ಕಾಗಿ ರಾಮಯ್ಯನೊಂದಿಗೆ ವಾಗ್ವಾದ ಮಾಡಿ ಶಾಸ್ತ್ರಾಭ್ಯಾಸಗಳಲ್ಲಿ ತೊಡಗುತ್ತಿದ್ದನು. ಕಾಯಕದ ಅರಿವಿಲ್ಲದ ಕಮಲಾಕರ ಹಣಕ್ಕಾಗಿ ತಂದೆಯನ್ನು ಪೀಡಿಸುತ್ತಿದ್ದನು. ದೊಡ್ಡ ದೊಡ್ಡ ವಿದ್ವಾಂಸರೆದುರು ಸೋತು ಮನೆಗೆ ಬರುತ್ತಿದ್ದನು. ಆದರೂ ತನ್ನ ತಂದೆ ರಾಮಯ್ಯ ನಿಗೆ " ನೋಡುತ್ತಿರು ನಾನು ಒಂದಲ್ಲಾ ಒಂದು ದಿನ ಮಹಾರಾಜರಿಂದ ಸನ್ಮಾನಿತನಾಗುತ್ತೇನೆ. ಅದು ನಿನ್ನಿಂದ ಸಾಧ್ಯವಿಲ್ಲ. ನೀನೋ ಅನಕ್ಷರಸ್...